ವಿಧವೆಯಾರಿಗಾಗಿ
(ಕೇಂದ್ರ ಸರ್ಕಾರ ಸ್ಕೀಮ್)
********************
ರಾಷ್ಟ್ರೀಯ ಕುಟುಂಬ  ಸಹಾಯಧನ ಯೋಜನೆ

ವಿಧವೆ ಸ್ರೀಯರಿಗೆ  20000/-ರೂಪಾಯಿ ಧನಸಹಾಯ ಯೋಜನೆ.


ಅರ್ಜಿ ಹಾಕಬೇಕಾಗಿರೋದು ಅವರವರ ಊರಿನ ಗ್ರಾಮಲೆಕ್ಕಿಗರಿಗೆ(VA).

ಅರ್ಜಿಯೊಂದಿಗೆ :
ಆಧಾರ್ ಕಾರ್ಡ್ (ಗಂಡ & ಹೆಂಡತಿ ಇಬ್ಬರ ಆಧಾರ್ ಕಾರ್ಡ್)
ರೇಷನ್ ಕಾರ್ಡ್
ಬ್ಯಾಂಕ್ ಖಾತೆ
ಗಂಡನ ಡೆತ್ ಸರ್ಟಿಫಿಕೇಟ್
 xerox ಕಾಪಿ ಸೇರಿಸಿ ಕೊಡಬೇಕು.

ಸೂಚನೆ‼
ಮರಣ ಹೊಂದಿದ ವ್ಯಕ್ತಿ 60ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು ಮರಣ ಹೊಂದಿದ 6 ತಿಂಗಳ ಒಳಗೆ ಅರ್ಜಿ ಹಾಕತಕ್ಕದ್ದು

ಈ ಸಂದೇಶವನ್ನು ಎಲ್ಲರಿಗೂ ಮುಟ್ಟಿಸಿ ವಿದವೆಯರಾದ ಸ್ತ್ರೀಯರಿಗೆ ಉಪಯೋಗವಾಗಲಿ......
ಮನೆ ಕಟ್ಟಲು 2.7 ಲಕ್ಷ ಹಣ ಮತ್ತು ಸರಕಾರದಿಂದ ಜಾಗ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ*: 30-7-2019



1. ಮನೆ ನಿರ್ಮಾಣಕ್ಕೆ ಸಹಾಯಧನ:

a) ಹಳೆ ಮನೆ / ಖಾಲಿ ಜಾಗ ಇದ್ದವರಿಗೆ ನಗರ ಪ್ರದೇಶದವರಿಗೆ:
ವಾಜಪೇಯಿ ವಸತಿ ಯೋಜನೆ  2.7 ಲಕ್ಷ (1.2  state Govt + 1.5 Central Govt)ಹಂತ ಹಂತದಲ್ಲಿ ಹಣ ಬಿಡುಗಡೆ.

b) ಹಳೆ ಮನೆ / ಖಾಲಿ ಜಾಗ ಇದ್ದ  ಗ್ರಾಮೀಣ ಪ್ರದೇಶದವರಿಗೆ: (ಮಹಿಳಾ ಅರ್ಜಿದಾರರಿಗೆ)
ಬಸವ ವಸತಿ ಯೋಜನೆ 1.2 ಲಕ್ಷ + 20000 (ನರೇಗಾ ಜಾಬ್ ಕಾರ್ಡ್ ಮಾಡಿದ್ದಲ್ಲಿ ಮಾತ್ರ) ಹಂತ ಹಂತದಲ್ಲಿ ಹಣ ಬಿಡುಗಡೆ.

ಅರ್ಜಿ ಸಲ್ಲಿಸುವುದು: ಗ್ರಾಮ ಪಂಚಾಯತ್/ ಮುನ್ಸಿಪಾಲ್ಟಿ / ನಗರ ಪಂಚಾಯತ್ / ನಗರ ಪಾಲಿಕೆ /Self in Online  (ಪ್ರಧಾನ ಮಂತ್ರಿ ಆವಾಸ್ ಯೋಜನೆಯ http://pmaymis.gov.in/  ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಲ್ಲಿ ಅದು ಆಯಾ ವ್ಯಾಪ್ತಿಯ ಗ್ರಾಮ ಪಂ/ ನಗರಪಾಲಿಕೆಗಳಿಗೆ ರವಾನೆಯಾಗುತ್ತದೆ)

ಬೇಕಾದ ದಾಖಲೆಗಳು

1. ಆರ್ ಟಿ ಸಿ. Copy.
2.ಒಪ್ಪಿಗೆ ಪತ್ರದ.
3.ಖಾತೆ ಪತ್ರದ copy.
4 Aadar Card copy.
5.Ration Card.
6. Voter Id copy.
7.Bank PassBook Copy
8.Income & Caste Certificate copy
9.Passport size photo-1
(ಅರ್ಜಿದಾರರು ಅಲ್ಲದ ಮನೆಯ ಇತರ ಸದಸ್ಯರ ಹೆಸರಿನಲ್ಲಿ ಆರ್ ಟಿ ಸಿ ಇದ್ದಲ್ಲಿ ಅವರಿಂದ ಒಪ್ಪಿಗೆ ಪತ್ರ)



2. ಜಾಗ ಇಲ್ಲದವರು ನಿವೇಶನಕ್ಕಾಗಿ ಅರ್ಜಿ
ಈ ಕೆಳಗಿನ ದಾಖಲೆಗಳೊಂದಿಗೆ ಗ್ರಾಮ ಪಂಚಾಯತ್/ ಮುನ್ಸಿಪಾಲ್ಟಿ / ನಗರ ಪಂಚಾಯತ್ / ನಗರ ಪಾಲಿಕೆಗಳಲ್ಲಿ ಅರ್ಜಿ ಸಲ್ಲಿಸುವುದು.
1.Aadar Card copy
2.Ration Card
3.Voter Id copy
4.Bank PassBook Copy
5.Income & Caste Certificate copy

ನಿವೇಶನ (ಜಾಗ) ಮಂಜೂರಾದಲ್ಲಿ ವಾಜಪೇಯಿ ವಸತಿ ಯೋಜನೆ / ಬಸವ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಧನಸಹಾಯ ಕೂಡ ಪಡೆಯಬಹುದು




3. ಮನೆ ನಿರ್ಮಾಣಕ್ಕೆ ಬ್ಯಾಂಕ್ ಲೋನ್:
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬ್ಯಾಂಕುಗಳಲ್ಲಿ ಆರು ಲಕ್ಷ ಲೋನ್ ಪಡೆದಲ್ಲಿ ಬಡ್ಡಿ ಮೊತ್ತ 6 % ರಂತೆ ಸುಮಾರು ಎರಡು ಲಕ್ಷದವರೆಗೆ ಸಬ್ಸಿಡಿ ಕೇಂದ್ರ ಸರಕಾರದಿಂದ ಖಾತೆಗೆ ಬೀಳಲಿದ್ದು, ಉಳಿದ ಹಣ ಪಾವತಿಮಾಡಬೇಕು. ಯೋಜನೆಗೆ ಅರ್ಜಿಯನ್ನು ಬ್ಯಾಂಕ್ ಮೂಲಕವೇ ಸಲ್ಲಿಸುವುದು.



4. ಗ್ರಾಮೀಣ ಪ್ರದೇಶದವರಿಗೆ ನರೇಗಾ ಯೋಜನೆ ಅಡಿಯಲ್ಲಿ ಬಾವಿ ತೋಡಲು ಸುಮಾರು 1 ಲಕ್ಷದ ವರೆಗೂ & ದನದ ಕೊಟ್ಟಿಗೆ ಗೆ 16000 ವರೆಗೂ ಸಹಾಯಧನವಿದೆ.

ಮಂಜುರಾತಿ:
ಅರ್ಜಿಯು ಯೋಜನಾ ಸಮಿತಿಗಳಲ್ಲಿ /ಬ್ಯಾಂಕ್ ನಲ್ಲಿ  ಮಂಜೂರಾದಲ್ಲಿ ಮಾತ್ರ ಈ ಹಣ ಲಭ್ಯವಾಗಲಿದೆ.

                      ***




 ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ.), ದ.ಕ ಜಿಲ್ಲೆ  ಮಂಗಳೂರು

ಮತೀಯ ಅಲ್ಪಸಂಖ್ಯಾತ ವರ್ಗದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಸಿಖ್ಖರು, ಬೌದ್ಧ ಜನಾಂಗದವರು  ನಿಗಮದಿಂದ ಅನುಷ್ಟನಗೊಳ್ಳುತ್ತಿರುವ ವಿವಿಧ ಯೋಜನೆಗಳು.

1) ಸ್ವಯಂ ಉದ್ಯೋಗ ಯೋಜನೆ
2) ಸ್ವಯಂ ಉದ್ಯೋಗ ಯೋಜನೆ
3) ಶ್ರಮಶಕ್ತಿ ಯೋಜನೆ
4)  ಅರಿವು (ವಿದ್ಯಾಭ್ಯಾಸ) ಸಾಲ ಯೋಜನೆ
5)  ಕಿರುಸಾಲ ಯೋಜನೆ
6)  ಕೃಷಿ ಯಂತ್ರೋಪಕರಣ ಖರೀದಿ ಯೋಜನೆ
7)  ಗಂಗಾಕಲ್ಯಾಣ ಯೋಜನೆ
8)  ಪಶು ಸಂಗೋಪನಾ ಯೋಜನೆ
9)  ಟ್ಯಾಕ್ಸಿ/ಗೂಡ್ಸ್ ವಾಹನ ಖರೀದಿ ಯೋಜನೆ



1) ಸ್ವಯಂ ಉದ್ಯೋಗ ಯೋಜನೆ:

  ವ್ಯಾಪಾರ, ಸಣ್ಣ ಕೈಗಾರಿಕೆ, ಕೃಷಿ ಮತ್ತು ಕೃಷಿ ಅವಲಂಬಿತ ಚಟುವಟಿಕೆಗಳು ಸೇವಾ ವಲಯದಲ್ಲಿ ಬರುವ ಚಟುವಟಿಕೆಗಳಿಗೆ ಬ್ಯಾಂಕ್ಗವಳು/ಹಣಕಾಸು ಸಂಸ್ಥೆಗಳ ಸಹಯೋಗದೊಂದಿಗೆ ಗರಿಷ್ಠ 5.00 ಲಕ್ಷ ರೂವರೆಗೆ ಆರ್ಥಿಕ ನೆರವು ಒದಗಿಸುವುದು. ಘಟಕ ವೆಚ್ಚ 5,00,000/- ರೂಗಳವರೆಗೆ ನಿಗಮದಿಂದ ಘಟಕ ವೆಚ್ಚದ ಶೇ.33 ಅಥವಾ ಗರಿಷ್ಠ ಮಿತಿ ರೂ.1,65,000/-ಗಳ ಸಹಾಯಧನ ಹಾಗೂ ಘಟಕವೆಚ್ಚದ ರೂ.1,00,000/-ರೂಗಳ ಒಳಗೆ ಇರುವ ಚಟುವಟಿಕೆಗಳಿಗೆ ಶೇಕಡಾ 50% ಅಥವಾ ಗರಿಷ್ಟ ಮಿತಿ ರೂ. 35,000/- ಸಹಾಯಧನ ಮಂಜೂರು ಮಾಡುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ಗಿಳು ಭರಿಸುವುದು.
ಬೇಕಾಗುವ ದಾಖಲಾತಿಗಳು :

1)ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 81,000/-, ನಗರ ಪ್ರದೇಶದವರಿಗೆ ರೂ. 1,03,000/-ಗಳ ಒಳಗಿರಬೇಕು.
2)ಅರ್ಜಿದಾರರ ಮತ್ತು ಜಾಮೀನುದಾರರ ಪಡಿತರ ಚೀಟಿ ಜರಾಕ್ಸ್ ಮತ್ತು ಆಧಾರ ಕಾರ್ಡ್ ಜರಾಕ್ಸ್.
3)ಕೊಟೇಶನ್/ಯೋಜನಾವರದಿ ಮತ್ತು ಲೈಸಸ್ಸ್
4.)ಅರ್ಜಿದಾರರ ಮತ್ತು ಜಾಮೀನುದಾರರ ತಲಾ ಮೂರು ಭಾವಚಿತ್ರ.
5) ಬ್ಯಾಂಕ್ ಪಾಸ್ ಪುಸ್ತಕದ ಜರಾಕ್ಸ್ ಪ್ರತಿ ಮತ್ತು ಆಧಾರ್ ಕಾರ್ಡ್ನ್ನುಾ ಬ್ಯಾಂಕಿನ ಉಳಿತಾಯ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು.
6)ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 10 ವರ್ಷ ವಾಸವಾಗಿರಬೇಕು.(ವಾಸ್ತವ್ಯ ದೃಡೀಕರಣ  ಪತ್ರ)
7) ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55ವರ್ಷಗಳು
8)ಅರ್ಜಿದಾರರು ಬ್ಯಾಂಕ್ ಪ್ರಭಂದಕರನ್ನು ಸಂರ್ಪಕಿಸಿ ಸಾಲ ನಿಡುವ ಬಗ್ಗೆ ಕಚಿತಪಡಿಸುವುದು.



2) ಶ್ರಮಶಕ್ತಿ ಯೋಜನೆ

ಈ ಯೋಜನೆಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಕಡು ಬಡವರು ಸಾಂಪ್ರದಾಯಿಕ ಕುಶಲಕರ್ಮಿಗಳು ಹಾಗೂ ವೃತ್ತಿಕುಲಕಸುಬುದಾರರು ಆಧುನಿಕತಂತ್ರಜ್ಞಾನ ಬಳಕೆಯಿಂದಾಗಿ ತಮ್ಮ ಸಾಂಪ್ರದಾಯಿಕ ಮಾರುಕಟ್ಟೆಯನ್ನು ಹಾಗೂ ವೃತ್ತಿಕೌಶಲತೆಗೆ ಅನುಗುಣವಾಗಿ ಅಭಿವೃದ್ಧಿ ಪಡಿಸಿಕೊಳ್ಳಲು ಮತ್ತು ಆದಾಯಾ ಹೆಚ್ಚಿಸುವ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಅಗತ್ಯವಿರುವ ಆರ್ಥಿಕ ನೆರವನ್ನು ಕಲ್ಪಿಸುವ ಉದ್ದೇಶದಿಂದ, „ಶ್ರಮಶಕ್ತಿ‟ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಹಾಗೂ ಸಾಂಪ್ರದಾಯಿಕ ವೃತ್ತಿ ಕುಲಕಸುಬುಗಳಾದ

ಅಟೋಮೊಬೈ ಲ್ರಿಿಪೇರಿ ಮತ್ತು ಸರ್ವಿಸಿಂಗ್,
ಗ್ಯಾಸ್ ಅಂಡ್ ಅರ್ಕ್ ವೆಲ್ಡಿಂಗ್,
ಬೆಡ್ ಮೇಕಿಂಗ್,
ವಲ್ಕನೈಸಿಂಗ್
ಮರದಕೆತ್ತನೆ ಕೆಲಸ,
ಬಡಗಿ,
ಟೈಲರಿಂಗ್,
ಬಟ್ಟೆ ಮೇಲೆ ಬಣ್ಣಗಾರಿಕೆ ಮತ್ತು ಮುದ್ರಣಗಾರಿಕೆ,
ಬೆತ್ತದ ಕೆಲಸ
ಸಿಲ್ಕ್ ರೀಲಿಂಗ್ ಮತ್ತು ಟ್ವಸ್ಟಿಂಗ್ ಕೆಲಸ,
ಗೊಂಬೆ ತಯಾರಿಕೆ ಮತ್ತು ಕೆತ್ತನೆ ಕೆಲಸ,
ಮರದ ಆಟಿಕೆ ತಯಾರಿಕೆ
ಮಂಡಕ್ಕಿ ಭಟ್ಟಿ,
ಅವಲಕ್ಕಿ ಭಟ್ಟಿ,
ಬಿದರಿನ ವರ್ಕ್,
ಕಮ್ಮಾರಿಕೆ,
ಎಲೆಕ್ಟೀಕಲ್ ವೈರಿಂಗ್ ಅಂಡ್ ರೀವೈಡಿಂಗ್ ಆಫ್ ಮೋಟಾರ್ಸ್,
ಮೀನುಗಾರಿಕೆ ಸಲಕರಣೆ ಖರೀದಿ,
ಹ್ಯಾಂಡಿಕ್ರಾಪ್ಟ್,
ಹೈನುಗಾರಿಕೆ,
ಕಲ್ಲು ಕೆತ್ತನೆ ಕೆಲಸ,
ಪಾತ್ರೆ ತಯಾರಿಕೆ,
ಕಲಾಯಿ ಕೆಲಸ,
ಸುಣ್ಣದಕಲ್ಲು ಸುಡುವಿಕೆ,
ಗಾಜಿನ ಅಲಂಕಾರಿಕ ವಸ್ತುಗಳ ತಯಾರಿಕೆ,
ಅಡಿಕೆ ತಟ್ಟೆ ಕಾಗದ ತಟ್ಟೆ ತಾಯಾರಿಕೆ,
ಕಿರಾಣಿ ಅಂಗಡಿ,
ಫಾಸ್ಟ್ ಪುಡ್ ಸೆಂಟರ್,
ಬೇಕರಿ ಮತ್ತು ಕಾಂಡಿಮೆಂಟ್ಸ್,
ತಂಪು ಪಾನೀಯ,
ಕಬ್ಬಿನ ರಸ,
ರೇಷ್ಮೆ ಹತ್ತಿ ನೇಕಾರಿಕೆ,
ಏಲಕ್ಕಿ ಹಾರ ತಯಾರಿಕೆ,
ಮೇಣದ ಬತ್ತಿ ತಯಾರಿಕೆ,
ತೆಂಗಿನ ನಾರಿನ ವಸ್ತುಗಳ ತಯಾರಿಕೆ,
ಪೊರಕೆ ತಯಾರಿಕೆ,
ಸೋಫಾ ಸೆಟ್ ತಯಾರಿಕೆ,
ಬ್ಯೂಟಿ ಪಾರ್ಲರ್,
ಎಲೆಕ್ಟಿಕಲ್ ಲಾಂಡ್ರಿ
ಎ.ಸಿ/ಪ್ರಿಡ್ಜ್ ರಿಪೇರಿ
ಜರ್ಡೋಸಿ/ಎಂಬ್ರಾಯಿಡರಿ,
ಫೋಟೋ ಫ್ರೇಮಿಂಗ್
ಮುಂತಾದ ಅವಶ್ಯಕತೆಗೆ ಇರುವ ಯಂತ್ರೋಪಕರಣಗಳು/ಸಲಕರಣೆಗಳು ಹಾಗೂ ಕಚ್ಚಾ ಸಾಮಾಗ್ರಿಗಳನ್ನು ಖರೀದಿಸಲು ರೂ. 50,000/- ದವರೆಗೆ ಸಾಲ:ಸಹಾಯಧನ ಸೌಲಭ್ಯವನ್ನು ನೀಡಲಾಗುವುದು. ಘಟಕ ವೆಚ್ಚ ರೂ. 50,000/-ಗಳ ಸಾಲದ ಮಂಜೂರಾತಿಯು ಸಾಂಪ್ರದಾಯಿಕ (ಪರಂಪರಾಗತ ಕುಶಲಕಮಿಗಳು/ವೃತ್ತಿ ಕುಲ ಕಸುಬುದಾರರಿಗೆ ಅನ್ವಯವಾಗುತ್ತದೆ. ಇತರೆ ವೃತ್ತಿಗಳಿಗೆ ಯೋಜನೆಯ ಲಾಭದಾಯಕತೆ ಮತ್ತು ಆದಾಯಗಳಿಗೆ ಅನುಗುಣವಾಗಿ ರೂ.25,000/-ಕ್ಕೆ ಮೀರದಂತೆ ಸಾಲವನ್ನು ಮಂಜೂರು ಮಾಡಲಾಗುವುದು. ಈ ಸಾಲಕ್ಕೆ ಶೇಕಡಾ 50% ರಷ್ಟು ಸಹಾಯ ಧನವನ್ನು ಬ್ಯಾಕ್ ಎಂಡ್ ಸಬ್ಸಿಡಿಯಾಗಿ ಪರಿಗಣಿಸಲಾಗುವುದು ನಿಗಮದಿಂದ ಬಿಡುಗಡೆ ಮಾಡಿದ ಸಾಲಕ್ಕೆ ಶೇಕಡಾ 4 ರ ಬಡ್ಡಿ ದರದಲ್ಲಿ ಮರುಪಾವತಿ ಪಡೆಯಲಾಗುತ್ತದೆ. ಒಂದು ಕುಟುಂಬಕ್ಕೆ ಒಬ್ಬರಿಗೆ ಮಾತ್ರ ಸಾಲ ಮಂಜೂರು ಮಾಡಲಾಗುವುದು.

ಬೇಕಾಗುವ ದಾಖಲಾತಿಗಳು:

1.)ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ  ರೂ. 81,000/-, ನಗರ ಪ್ರದೇಶದವರಿಗೆ ರೂ. 1,03,000/-ಗಳ ಒಳಗಿರಬೇಕು.
2).ಅರ್ಜಿದಾರರ ಮತ್ತು ಜಾಮೀನುದಾರರ ಪಡಿತರ ಚೀಟಿ ಜರಾಕ್ಸ್ ಮತ್ತು ಆಧಾರ ಕಾರ್ಡ್ ಜರಾಕ್ಸ್.
3) ಕೊಟೇಶನ್ ಅಥವಾ ಯೋಜನಾ ವರದಿ ಮತ್ತು ಲೈಸಸ್ಸ್
4)ಅರ್ಜಿದಾರರ ಮತ್ತು ಜಾಮೀನುದಾರರ ತಲಾ ಮೂರು ಭಾವಚಿತ್ರ.
5)ಬ್ಯಾಂಕ್ ಪಾಸ್ ಪುಸ್ತಕದ ಜರಾಕ್ಸ್ ಪ್ರತಿ ಮತ್ತು ಆಧಾರ್ ಕಾರ್ಡ್  ಬ್ಯಾಂಕಿನ ಉಳಿತಾಯ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು.
6)ಅರ್ಜಿದಾರರು ಕರ್ನಾಟಕ  ರಾಜ್ಯದಲ್ಲಿ ಕನಿಷ್ಠ 10 ವರ್ಷ ವಾಸವಾಗಿರಬೇಕು.(ವಾಸ್ತವ್ಯ ದೃಡೀಕರಣ ಪತ್ರ)
7)ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳು.




3) ಅರಿವು (ವಿದ್ಯಾಭ್ಯಾಸ) ಸಾಲ ಯೋಜನೆ

ಈ ಯೋಜನೆಯ ಅಡಿಯಲ್ಲಿ ವೃತ್ತಿನಿರತ ವಿದ್ಯಾಭ್ಯಾಸಕ್ಕಾಗಿ ಅಂದರೆ
ಎಂ.ಬಿ.ಬಿ.ಎಸ್,
ಇಂಜಿನಿಯರಿಂಗ್,
ಎಂ.ಬಿ.ಎ,
ಎಂ.ಸಿ.ಎ,
ಎಂ.ಟೆಕ್,
ಪಿ.ಎಚ್.ಡಿ,
ಎಂ.ಇ,
ಎಂ.ಎಸ್(ಅಗ್ರಿ),
ಎಂ.ಡಿ,
ಎಂ.ಎಫ್.ಎ,
ಎಂ.ಡಿ.ಎಸ್,
ಎಂ.ಟಿ.ಎ,
ಎಂ.ಐ.ಬಿ,
ಬಿ.ಎ,
ಬಿ.ಕಾಂ,
ಡಿ.ಎಡ್,
ಐ.ಟಿ.ಐ,
ಡಿಪ್ಲೋಮಾ,
ನರ್ಸಿಂಗ್,
ಬಿ.ಡಿ.ಎಸ್,
ಎಂ.ಎ,
ಬಿ.ಎಸ್ಸಿ
ಬಿ.ಎ,
ಬಿ.ಕಾಂ,
ಏರ್ ಕ್ರಾಫ್ಟ್ ಮೈಂಟನೆನ್ಸ್
ಇಂಜಿನಿಯರಿಂಗ್,
ಟೆಕ್ನಕಲ್ ಮ್ಯಾನೆಜ್ಮೆಂಟ್
ಇತ್ಯಾದಿ ವಿದ್ಯಾಭ್ಯಾಸಕ್ಕಾಗಿ ಅಭ್ಯರ್ಥಿಗಳಿಗೆ ಅವರು ವ್ಯಾಸಂಗ ಪೂರ್ಣಗೊಳಿಸುವವರಿಗೆ ಪ್ರತಿ ವರ್ಷಕ್ಕೆ ರೂ. 10,000/- ದಿಂದ ರೂ.75,000/-ದವರೆಗೆ ವಿವಿಧ ವ್ಯಾಸಂಗಕ್ಕೆ ಅನುಗುಣವಾಗಿ ನಿಗಮದಿಂದ ಸಾಲ ಸೌಲಭ್ಯವನ್ನು ಕಲ್ಪಿಸುವ ಉದ್ದೇಶ ಹೊಂದಿದೆ.
ಬಿ.ಇ,
ಎಂ.ಬಿ.ಬಿ.ಎಸ್,
ಬಿ.ಡಿ.ಎಸ್,
ಬಿ.ಯು.ಎಂ.ಎಸ್ ಹಾಗೂ
ಬಿ.ಎ.ಎಂ.ಎಸ್ ವ್ಯಾಸಾಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ಸಿ.ಇ.ಟಿಯವರು ನಿಗದಿಪಡಿಸಿದ ಶುಲ್ಕದಂತೆ ಸಾಲ ಬಿಡುಗಡೆ ಮಾಡಲಾಗುವುದು. ಇದಕ್ಕೆ ವಾರ್ಷಿಕವಾಗಿ ಶೇಕಡಾ 2% ಸೇವಾ ಶುಲ್ಕವನ್ನು ವಿಧಿಸಲಾಗುತ್ತದೆ ಹಾಗೂ ವ್ಯಾಸಂಗ ಮುಗಿಸಿದ ಒಂದು ವರ್ಷದ ನಂತರ ಫಲಾನುಭವಿಯು ನಿಗಮಕ್ಕೆ ಮರುಪಾವತಿಯನ್ನು ಮಾಡಬೇಕಾಗಿದೆ.



‘ಅರಿವು’ (CET) ಯೋಜನೆ

ಸಾಮಾನ್ಯ ಪ್ರವೇಶ ಪರೀಕ್ಷೆಗೆ (CET) ಹಾಜರಾದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಯು ರ್ಯಾಕಿಂಗ್ ಪಡೆದು ವೃತ್ತಿಪರ ಶಿಕ್ಷಣಕ್ಕೆ ಸೀಟನ್ನು ಆಯ್ಕೆ ಮಾಡಿಕೊಂಡ ಕೂಡಲೇ ನಿಗಮವು ಅಂತಹ ವಿದ್ಯಾರ್ಥಿಗೆ ಮುಂಚಿತವಾಗಿ ಸಾಲವನ್ನು ಮಂಜೂರು ಮಾಡುತ್ತದೆ. ಅಂತಹ ವಿದ್ಯಾರ್ಥಿಯು ಸಂಬಂಧ ಪಟ್ಟ ಕಾಲೇಜಿಗೆ ಪಾವತಿಸಬೇಕಾದ ಬೋಧನಾ ಶುಲ್ಕವನ್ನು ನಿಗಮವು ನೇರವಾಗಿ ಏಇಂ ಮೂಲಕ ಪಾವತಿಸುತ್ತದೆ.



‘ಅರಿವು’ (NEET) ಯೋಜನೆ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಮಾಡ ಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು NEET ಪರೀಕ್ಷೆಗೆ ಹಾಜರಾದಲ್ಲಿ, ಅವರ ಬೋಧನಾ ಶುಲ್ಕದ ಸರ್ಕಾರಿ ಸೀಟ್ ನ ಶೇಕಡಾ 100ರಷ್ಟು ಅಥವಾ ಖಾಸಗಿ ಸೀಟ್ ನ ಶೇಕಡಾ.50 ರಷ್ಟು ಸಾಲವನ್ನಾಗಿ ಮಂಜೂರು ಮಾಡಲಾಗುತ್ತದೆ.

ಬೇಕಾಗುವ ದಾಖಲಾತಿಗಳು:

1)ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ 6,00,000/-ರೂಗಳ ಒಳಗಿರಬೇಕು.
2) ವಿದ್ಯಾರ್ಥಿಯ 4 ಭಾವಚಿತ್ರ ಮತ್ತು ತಂದೆ ಅಥವಾ ತಾಯಿಯ 2 ಭಾವಚಿತ್ರ.
3)ಪಡಿತರ ಚೀಟಿ ಜರಾಕ್ಸ್ ಮತ್ತು ಆಧಾರ ಕಾರ್ಡ್ ಜರಾಕ್ಸ್.
4) ಎಸ್.ಎಸ್.ಎಲ್.ಸಿ, ಡಿಪ್ಲೋಮಾ, ಪಿಯುಸಿ, ಡಿಗ್ರಿ ಮತ್ತು ಸೆಮಿಸ್ಟರ್ ಮಾರ್ಕ್ಸ್ ಕಾರ್ಡ್ (ದೃಡಿಕರಿಸಿದ ಪ್ರತಿ)
5) ಸ್ಟಡಿ ಸರ್ಟಿಫಿಕೇಟ್ ಮೂಲ ಪ್ರತಿ
6)ಫೀಸ್ ಸ್ಟ್ರಕ್ಚರ್ (ಒಟ್ಟು ವ್ಯಾಸಂಗದ ಅವಧಿ).
7) ಸಿಇಟಿ/ನೀಟ್ ಪ್ರಮಾಣ ಪತ್ರದ ಜರಾಕ್ಸ್.
8) 50 ರೂಪಾಯಿಯ ಛಾಪಾ ಕಾಗದ (Indemnity Bond) ತಂದೆ ಅಥವಾ ತಾಯಿಯ ಹೆಸರಿನಲ್ಲಿ (ನೋಟರಿಯೊಂದಿಗೆ) 2nd Party DM KMDC  ಎಂದು ನಮೂದಿಸಬೇಕು.
9) ವಿದ್ಯಾರ್ಥಿಯು ಅಭ್ಯಾಸ ಮಾಡುವ ಕಾಲೇಜಿನ ಬ್ಯಾಂಕ್ ಖಾತೆ, (Bank name, Account payee name, Account number, ifsc code) ಮತ್ತು ಇಮೇಲ್ ಐಡಿ.




4) ಕಿರುಸಾಲ ಯೋಜನೆ.

ಈ ಯೋಜನೆಯಡಿಯಲ್ಲಿ ನಗರ ಪ್ರದೇಶದಲ್ಲಿ ಮತ್ತು ಗ್ರಾಮಗಳಲ್ಲಿ ವಾಸವಾಗಿರುವ ಮತೀಯ ಅಲ್ಪಸಂಖ್ಯಾತರು ಸಾಮನ್ಯವಾಗಿ ಅನಕ್ಷರಸ್ಥರಾಗಿದ್ದು, ಅಂತಹ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಕುಶಲ ಅಥವಾ ಕುಶಲವಲ್ಲದ ವ್ಯಕ್ತಿಗಳ ಅಭಿವೃದ್ಧಿಗಾಗಿ ಸಣ್ಣ ಪ್ರಮಾಣದ ವ್ಯಾಪಾರವನ್ನು ಮಾಡಲು ಸಾಲ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ. ನಿಗಮದಿಂದ ಫಲಾನುಪೇಕ್ಷಿಗಳು ಸ್ವ-ಸಹಾಯ ಗುಂಪುಗಳನ್ನು ಇತರೆ ಇಲಾಖೆಗಳ ಅಥವಾ ಸರ್ಕಾರೇತರ ಸಂಸ್ಥೆಗಳ ಮೂಲಕ ಸಂಘಟನೆ ಮಾಡಿ ಸ್ವ ಸಹಾಯ ಗುಂಪುಗಳು ಮೂಲಕ ಯೋಜನೆಯನ್ನು ಸಿದ್ದಪಡಿಸಿ ಅನುಷ್ಟಾನ ಗೊಳಿಸಬಹುದಾಗಿದೆ. ಸ್ವ-ಸಹಾಯ ಸಂಘವು ಆರ್ಥಿಕ ಚಟುವಟಿಕೆಗಳಲ್ಲಿ ಲಾಭದಲ್ಲಿರಬೇಕು. ಸ್ವ-ಸಹಾಯ ಗುಂಪಿನ ಸದಸ್ಯರಾಗಿರುವ ಫಲಾನುಭವಿ ಜಮೀನು ಹೊಂದಿದ್ದಲ್ಲಿ ಅಥವಾ ಸರ್ಕಾರಿ/ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಉದ್ಯೋಗದಲ್ಲಿದ್ದಲ್ಲಿ ಅವರಿಗೆ ಸಣ್ಣ ಪ್ರಮಾಣದ ಆರ್ಥಿಕ ಸಾಲ ಯೋಜನೆಯಡಿಯಲ್ಲಿ ಸಾಲ ಮಂಜೂರು ಮಾಡತಕ್ಕದ್ದಲ್ಲ. ಮೈಕ್ರೋ ಕ್ರೆಡಿಟ್ ಹಣಕಾಸು ಯೋಜನೆಯಡಿ ಮತ್ತು ಸ್ವಯಂ ಉದ್ಯೋಗ ಯೋಜನೆಯಡಿ ಶೇಕಡ 50 ರಷ್ಟು ಸಹಾಯಧನ, ಗರಿಷ್ಟ ರೂ.5,000/-ಗಳು ಪ್ರತಿ ಫಲಾನುಭವಿಗೆ ಫಲಾನುಭವಿಯ ಹೆಸರಿನಲ್ಲಿ ಮಂಜೂರು ಮಾಡಿ ಬಿಡುಗಡೆ ಮಾಡಿರುವ ಸಾಲವನ್ನು ಸ್ವ-ಸಹಾಯ ಗುಂಪುಗಳಿಗೆ ಬ್ಯಾಂಕಿನಲ್ಲಿ ತೆರೆದಿರುವ ಖಾತೆಯ ಸಂಖ್ಯೆ ನಮೂದಿಸಿ ಚೆಕ್ಕುಗಳನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಬಹುದಾಗಿದೆ. ಸ್ವ ಸಹಾಯ ಸಂಘಗಳು ಸಾಲವನ್ನು ಫಲಾನುಭವಿಗೆ ಶೇಕಡ 5 ರ ಬಡ್ಡಿ ದರದಲ್ಲಿ ನೀಡಬೇಕು.

ಬೇಕಾಗುವ ದಾಖಲಾತಿಗಳು :

1)ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 81,000/-, ನಗರ ಪ್ರದೇಶದವರಿಗೆ ರೂ. 1,03,000/-ಗಳ ಒಳಗಿರಬೇಕು.
2)ಅರ್ಜಿದಾರರ ಮತ್ತು ಜಾಮೀನುದಾರರ ಪಡಿತರ ಚೀಟಿ ಜರಾಕ್ಸ್ ಮತ್ತು ಆಧಾರ ಕಾರ್ಡ್ ಜರಾಕ್ಸ್.
3) ಕೊಟೇಶನ್ ಅಥವಾ ಯೋಜನಾ ವರದಿ
4) ಅರ್ಜಿದಾರರ ಮತ್ತು ಜಾಮೀನುದಾರರ ತಲಾ ಮೂರು ಭಾವಚಿತ್ರ.
5) ಸಂಘದ ಹೆಸರಿನ ರಾಷ್ಟ್ರೀಕೃತ ಬ್ಯಾಂಕಿನ ಪಾಸ್ ಪುಸ್ತಕದ ಜರಾಕ್ಸ್ ಪ್ರತಿ. ಮತ್ತು ssಸಂಘ ರಚನೆಯಾಗಿ  ಕನಿಷ್ಟ 1 ವರ್ಷ ಆಗಿರಬೇಕು
6) ಬ್ಯಾಂಕ್ ಬೇ ಬಾಕಿ ಪ್ರಮಾಣ ಪತ್ರ.
7) ಸಂಘದ ನಡಾವಳಿ ಪುಸ್ತಕ.
8) ಸ್ವಸಹಾಯ ಗುಂಪಿನ ಗಾತ್ರ ಕನಿಷ್ಟ 10 ರಿಂದ ಗರಿಷ್ಟ 20 ಸದಸ್ಯರ ಮಿತಿಯಲ್ಲಿರಬೇಕು.
9)ಪ್ರತಿ ಸದಸ್ಯರ ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ಜರಾಕ್ಸ್ ಪ್ರತಿ.
10)ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 10 ವರ್ಷ ವಾಸವಾಗಿರಬೇಕು. (ವಾಸ್ತವ್ಯ ದೃಡೀಕರಣ ಪತ್ರ)
11) ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55ವರ್ಷಗಳು.





5) ಕೃಷಿ ಯಂತ್ರೋಪಕರಣ ಖರೀದಿ ಯೋಜನೆ  (Minoritys Farmers Scheme) :

ಅಲ್ಪಸಂಖ್ಯಾತರ ಸಮುದಾಯಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಟಿಲ್ಲರ್, ಉಕ್ಕಿನ ನೇಗಿಲು, ಡ್ರಿಲ್ಸ್, ಕಳೆ ಕೀಳುವ ಯಂತ್ರ, ಪಂಪ್ಸೆ ಟ್, ಟ್ರಾಕ್ಟರ್, ಮುಂತಾದ ನೂತನ ಕೃಷಿ ಸಲಕರಣಿಗಳನ್ನು ಶೇಕಡಾ.50 ರಷ್ಟು ಸಹಾಯಧನ ಸೇರಿ ಗರಿಷ್ಟ 1 ಲಕ್ಷ ರೂ. ಘಟಕ ವೆಚ್ಚದಲ್ಲಿ ನೀಡಲಾಗುವುದು.

ಬೇಕಾಗುವ ದಾಖಲಾತಿಗಳು:

1.)ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ  ರೂ. 81,000/-, ನಗರ ಪ್ರದೇಶದವರಿಗೆ ರೂ. 1,03,000/-ಗಳ ಒಳಗಿರಬೇಕು.
2)ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು (ವಾಸ್ತವ್ಯ ದೃಡೀಕರಣ ಪತ್ರ)
3) ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 45ವರ್ಷಗಳು.
4) ಅರ್ಜಿದಾರರ ಮತ್ತು ಜಾಮೀನುದಾರರ ಪಡಿತರ ಚೀಟಿ ಜರಾಕ್ಸ್ ಮತ್ತು ಆಧಾರ ಕಾರ್ಡ್ ಜರಾಕ್ಸ್
5) ಅರ್ಜಿದಾರರ ಮತ್ತು ಜಾಮೀನುದಾರರ ತಲಾ ಮೂರು ಭಾವಚಿತ್ರ.
6) ಬ್ಯಾಂಕ್ ಪಾಸ್ ಪುಸ್ತಕದ ಜರಾಕ್ಸ್ ಪ್ರತಿ ಮತ್ತು ಆಧಾರ್ ಕಾರ್ಡ್ ಬ್ಯಾಂಕಿನ ಉಳಿತಾಯ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು.
7) ಆರ್.ಟಿ.ಸಿ ಯ ಮೂಲಪ್ರತಿ
8) ಕೊಟೇಶನ್
9) ಫಲಾನುಭವಿ ಅಥವಾ ಅವರ ಕುಟುಂಬ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರದ ನೌಕರರಲ್ಲದ ಬಗ್ಗೆ ದೃಢೀಕರಣ ಪತ್ರ (Affidavit).
10) ಈ ಯೋಜನೆಯಡಿ ಪಡೆದ ಸಾಲ ಸೌಲಭ್ಯವನ್ನು ಯಾರಿಗೂ ಪರಭಾರೆ ಮಾಡದಿರುವ ಬಗ್ಗೆ ಧೃಢೀಕರಣ ಪತ್ರ (Affidavit).




6) *ಗಂಗಾಕಲ್ಯಾಣ ಯೋಜನೆ*

ಈ ಯೋಜನೆಯಲ್ಲಿ ಪ್ರಮುಖವಾಗಿ ವೈಯಕ್ತಿಕ ನೀರಾವರಿ ಯೋಜನೆಯಗಳಲ್ಲಿ ಉಚಿತವಾಗಿ ನೀರಾವರಿ ಸೌಲಭ್ಯ ಒದಗಿಸುವುದು. ಮತೀಯ ಅಲ್ಪಸಂಖ್ಯಾತ ವರ್ಗಗಳ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರು ಒಂದೇ ಕಡೆ ಕನಿಷ್ಠ 1 ಎಕರೆ ಒಣ ಜಮೀನಿಗೆ 2.00 ಲಕ್ಷ ರೂಗಳ ಘಟಕ ವೆಚ್ಚದಲ್ಲಿ ಕೊಳವೆ ಬಾವಿ/ತೆರೆದ ಬಾವಿ ಕೊರೆಯಿಸಿ ಪಂಪ್ಸೆ ಟ್ ಮತ್ತು ಇತರ ಉಪಕರಣಗಳನ್ನು ಸರಬರಾಜು ಮಾಡಿ ಹಾಗೂ ಬೆಸ್ಕಾಂಗಳಿಗೆ ವೈಎಂಡಿ ಮತ್ತು ಇಎಂಡಿ ಹಣ ಪಾವತಿಸಿ ನೀರಾವರಿ ಸೌಲಭ್ಯ ಒದಗಿಸುವುದು.
ಬೇಕಾಗುವ ದಾಖಲಾತಿಗಳು :

1. ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 81,000/
2) ಪಡಿತರ ಚೀಟಿ ಜರಾಕ್ಸ್ ಮತ್ತು ಆಧಾರ ಕಾರ್ಡ್ ಜರಾಕ್ಸ್.
3)ಆರ್.ಟಿ.ಸಿಯ ಮೂಲಪ್ರತಿ ಹಾಗೂ ಅರ್ಜಿದಾರರ 4 ಭಾವಚಿತ್ರ
4) ಇಸಿ, ಭೂ ನಕ್ಷೆ, ವಂಶವೃಕ್ಷ (ಸಂತತಿ ನಕ್ಷೆ) ಮತ್ತು ಕಂದಾಯ ರಶೀದಿ ಮೂಲ ಪ್ರತಿ
5) ಸಣ್ಣ ಹಿಡುವಳಿದಾರರ ಪ್ರಮಾಣಪತ್ರ. (ತಹಶೀಲ್ದಾರರಿಂದ)
6).ಕೃಷಿ ಅವಲಂಬಿತರಾಗಿರುವ ಬಗ್ಗೆ ಗ್ರಾಮ ಲೆಕ್ಕಾಧಿಕಾರಿಯವರಿಂದ ದೃಢೀಕರಣ ಪತ್ರ.
7) ಬೇರೆ ನೀರಾವರಿ ಸೌಲಭ್ಯ ಇಲ್ಲದ ಬಗ್ಗೆ ಸ್ವಯಂ ಘೋಷಣಾ ಪತ್ರ.
8) ಕೊಳವೆಬಾವಿ ಕೊರೆಯುವ ಬಗ್ಗೆ ಗ್ರಾಮ ಪಂಚಾಯತ್ ನ ಪಿ.ಡಿ.ಒ ರಿಂದ ಪಡೆದ ಆಕ್ಷೇಪಣಾರಹಿತ ಪ್ರಮಾಣಪತ್ರ.
9)ಮೆಸ್ಕಾಂನಿಂದ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ಪ್ರಮಾಣ ಪತ್ರ.
10) ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 10 ವರ್ಷ ವಾಸವಾಗಿರಬೇಕು. (ವಾಸ್ತವ್ಯ ದೃಡೀಕರಣ ಪತ್ರ)
11)ಅರ್ಜಿದಾರರ ವಯಸ್ಸು  ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳು.




7) ಪಶು ಸಂಗೋಪನಾ ಯೋಜನೆ

ಈ ಯೋಜನೆಯಡಿ ಪಶು ಸಂಗೋಪನೆಗೆ ಉತ್ತೇಜನ ನೀಡಿ ಗ್ರಾಮೀಣ ಪ್ರದೇಶದ ಅಲ್ಪಸಂಖ್ಯಾತರು ನಿರಂತರ ಆದಾಯ ಹೊಂದುವ ಸಲುವಾಗಿ
ಹೈನುಗಾರಿಕೆ,
ಕೋಳಿ ಸಾಕಾಣಿಕೆ,
ಕುರಿ ಸಾಕಾಣಿಕೆ,
ಮುಂತಾದ ಕೃಷಿ ಸಂಬಂಧಿತ ಚಟುವಟಿಕೆಗಳನ್ನು ನಡೆಸಲು ಶೇಕಡಾ 50 ರಷ್ಟು ಸಹಾಯಧನ ಸೇರಿ ರೂ.40,000 ಘಟಕ ವೆಚ್ಚದಲ್ಲಿ ಸಹಾಯ ನೀಡಲಾಗುವುದು. ಈ ಯೋಜನೆಯಡಿ ಶೇಕಡಾ 100 ರಷ್ಟು ಮಹಿಳೆಯರಿಗೆ ಮೀಸಲಾತಿಯನ್ನು ನೀಡಲಾಗುವುದು.

ಬೇಕಾಗುವ ದಾಖಲಾತಿಗಳು:
1) ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ. 1,03,000/- ಒಳಗಿರಬೇಕು.
2) ಅರ್ಜಿದಾರರ ಮತ್ತು ಜಾಮೀನುದಾರರ ಪಡಿತರ ಚೀಟಿ ಜರಾಕ್ಸ್ ಮತ್ತು ಆಧಾರ ಕಾರ್ಡ್ ಜರಾಕ್ಸ್.
3) ಜಾನುವಾರು ಮೌಲ್ಯ ಬಗ್ಗೆ ಪಶು ವೈದ್ಯಾದಿಕಾರಿಯಿಂದ ಪ್ರಮಾಣ ಪತ್ರ
4) ಅರ್ಜಿದಾರರ ಮತ್ತು ಜಾಮೀನುದಾರರ ತಲಾ ಮೂರು ಭಾವಚಿತ್ರ.
5) ಬ್ಯಾಂಕ್ ಪಾಸ್ ಪುಸ್ತಕದ ಜರಾಕ್ಸ್ ಪ್ರತಿ ಮತ್ತು ಆಧಾರ್ ಕಾರ್ಡ್  ಬ್ಯಾಂಕಿನ ಉಳಿತಾಯ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು.
6)ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು (ವಾಸ್ತವ್ಯ ದೃಡೀಕರಣ ಪತ್ರ).
7) ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 45 ವರ್ಷಗಳು.
8) ಫಲಾನುಭವಿ ಅಥವಾ ಅವರ ಕುಟುಂಬ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರದ ನೌಕರರಲ್ಲದ ಬಗ್ಗೆ ದೃಢೀಕರಣ ಪತ್ರ
9) ಕಳೆದ 05 ವರ್ಷಗಳಲ್ಲಿ ಪಶುಪಾಲನಾ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ಯಾವುದೇ ಯೋಜನೆಗಳಿಂದ ಸಾಲ ಸೌಲಭ್ಯ ಪಡೆದಿಲ್ಲದಿರುವುದರ ಬಗ್ಗೆ ಧೃಢೀಕರಣ ಪತ್ರ.
10) ಈ ಯೋಜನೆಯಡಿ ಪಡೆದ ಸಾಲ ಸೌಲಭ್ಯವನ್ನು ಯಾರಿಗೂ ಪರಭಾರೆ ಮಾಡದಿರುವ ಬಗ್ಗೆ ಧೃಢೀಕರಣ ಪತ್ರ.




8) ಟ್ಯಾಕ್ಸಿ/ಗೂಡ್ಸ್ ವಾಹನ ಖರೀದಿ ಯೋಜನೆ

ಈ ಯೋಜನೆಯಡಿ ಅಲ್ಪಸಂಖ್ಯಾತ ಸಮುದಾಯದವರು ನಗರಗಳಲ್ಲಿ ಹಾಗೂ ಗ್ರಾಮೀಣ ಮಟ್ಟದಲ್ಲೂ ಸಹ ಹೆಚ್ಚಿನ ವಿಧ್ಯಾಭ್ಯಾಸವನ್ನು ಪೂರೈಸಲು ಸಾಧ್ಯವಾಗದೇ ವಾಹನ ಚಾಲಕರಾಗಿ ತಮ್ಮ ನಿತ್ಯ ಜೀವನವನ್ನು ಸಾಗಿಸುತ್ತಿದ್ದಾರೆ ಇಂತಹ ಆರ್ಥಿಕವಾಗಿ ಹಿಂದುಳಿದ ಫಲಾನುಭವಿಗಳನ್ನು ಆಯ್ಕೆ ಮಾಡಿ ಇವರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವ ಉದ್ದೇಶದೊಂದಿಗೆ ರಾಷ್ಟ್ರೀಕೃತ ಬ್ಯಾಂಕುಗಳ ಸಹಯೋಗದೊಂದಿಗೆ ಟ್ಯಾಕ್ಸಿ/ಗೂಡ್ಸ್ ವಾಹನಗಳನ್ನು ಖರೀದಿಸಲು ಗರಿಷ್ಟ 3 ಲಕ್ಷಗಳ ಸಹಾಯಧನವನ್ನು ನೀಡಲಾಗುವುದು. ಈ ಯೋಜನೆಯಡಿಯಲ್ಲಿ ಖರೀದಿಸುವ ವಾಹನದ ಮೌಲ್ಯವು ಕನಿಷ್ಟ ರೂ. 4 ಲಕ್ಷಗಳಿಂದ ಗರಿಷ್ಟ ರೂ. 7.50ಲಕ್ಷಗಳಾಗಿರತಕ್ಕದ್ದು (ತೆರಿಗೆಯನ್ನು ಹೊರತುಪಡಿಸಿ).

ಬೇಕಾಗುವ ದಾಖಲಾತಿಗಳು:
1.)ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ  ರೂ. 81,000/-, ನಗರ ಪ್ರದೇಶದವರಿಗೆ ರೂ. 1,03,000/-ಗಳ ಒಳಗಿರಬೇಕು.
 2. ಅರ್ಜಿದಾರರ ಮತ್ತು ಜಾಮೀನುದಾರರ ಪಡಿತರ ಚೀಟಿ ಜರಾಕ್ಸ್ ಮತ್ತು ಆಧಾರ ಕಾರ್ಡ್ ಜರಾಕ್ಸ್.
3ಕೊಟೇಶನ್ ಮತ್ತು ಲೈಸಸ್ಸ್ ಬ್ಯಾಡ್ಜ್ನೊಂ.ದಿಗೆ.
4. ಅರ್ಜಿದಾರರ  ತಲಾ ಮೂರು ಭಾವಚಿತ್ರ.
5. ಅರ್ಜಿದಾರರ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ.
6. ಬ್ಯಾಂಕ್ ಪಾಸ್ ಪುಸ್ತಕದ ಜರಾಕ್ಸ್ ಪ್ರತಿ ಮತ್ತು ಆಧಾರ್ ಕಾರ್ಡ್  ಬ್ಯಾಂಕಿನ ಉಳಿತಾಯ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು.
7.ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು (ವಾಸ್ತವ್ಯ ದೃಡೀಕರಣ  ಪತ್ರ)
8. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 45 ವರ್ಷಗಳು.
9. ಫಲಾನುಭವಿ ಅಥವಾ ಅವರ ಕುಟುಂಬ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರದ ನೌಕರರಲ್ಲದ ಬಗ್ಗೆ ದೃಢೀಕರಣ ಪತ್ರ.
10. ಕಳೆದ 05 ವರ್ಷಗಳಲ್ಲಿ ಟ್ಯಾಕ್ಸಿ/ಗೂಡ್ಸ್ ವಾಹನವನ್ನು ಖರೀದಿಗೆ ಸಂಬಂಧಿಸಿದಂತೆ ಸರ್ಕಾರದ ಯಾವುದೇ ಯೋಜನೆಗಳಿಂದ ಸಾಲ ಸೌಲಭ್ಯ ಪಡೆದಿಲ್ಲದಿರುವುದರ ಬಗ್ಗೆ ಧೃಢೀಕರಣ ಪತ್ರ.
11. ಈ ಯೋಜನೆಯಡಿ ಪಡೆದ ಸಾಲ ಸೌಲಭ್ಯವನ್ನು ಯಾರಿಗೂ ಪರಭಾರೆ ಮಾಡದಿರುವ ಬಗ್ಗೆ ಧೃಢೀಕರಣ ಪತ್ರ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ.)





ನಮ್ಮ ಭಾರತ ದೇಶದಲ್ಲಿ ಅತೀ ಮುಂಚೂಣಿಯಲ್ಲಿರುವ ಮಹತ್ವಾಕಾಂಕ್ಷಿ ಯೋಜನೆಯಾದ 
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ.

 ಇದರ ಅಡಿಯಲ್ಲಿ ತಮ್ಮ ಹತ್ತಿರದ  ಗ್ರಾಮ ಪಂಚಾಯ್ತಿಗೆ ಬೇಟಿ ನೀಡಿ ಉದ್ಯೋಗ ಚೀಟಿ (job card) ಮಾಡಿಸಿ ಕೊಳ್ಳಲು ವಿನಂತಿ.

ಒಂದು ಕುಟುಂಬಕ್ಕೆ 150 ದಿನಗಳ ಉದ್ಯೋಗ ಖಾತರಿ, ಒಂದು ದಿನಕ್ಕೆ 249/-ಕೂಲಿ ದರವನ್ನಾಗಿ ನಿಗದಿ ಪಡಿಸಲಾಗಿದೆ.

ಇದರ ಮುಖ್ಯ ಉದ್ದೇಶ ಗ್ರಾಮೀಣ ಬಡ ಜನರಿಗೆ ಆಧಾರವಾಗಿ ನೈಸಗ೯ಕ ಸಂಪನ್ಮೂಲ ಬಲಪಡಿಸುವುದು, ವಲಸೆ ತಡೆಗಟ್ಟುವುದು, ಆಥಿ೯ಕ ಭದ್ರತೆ ಒದಗಿಸುವುದು ಮತ್ತು ಆಸ್ತಿ ಸೃಜನೆ ಮಾಡುವುದಾಗಿದೆ.

 ಇದರಿಂದಾಗುವ ಪ್ರಯೋಜನಗಳು:-

1.ಸಕಾ೯ರದಿಂದ ವಸತಿ ಮಂಜೂರಾದರೆ ಈ ಯೋಜನೆಯ ಅಡಿಯಲ್ಲಿ ಕೂಲಿ ಹಣ 22,410 ರೂ/- ದೊರೆಯುತ್ತದೆ.

2.ದನದ ಕೊಟ್ಟಿಗೆ , ಕುರಿ ಶೆಡ್, ಮೇಕೆ ಶೆಡ್, ಕೋಳಿ ಶೆಡ್, ಹಂದಿ ಶೆಡ್ ನಿಮಾ೯ಣಕ್ಕೆ 43,000/- ದೊರೆಯುತ್ತದೆ.

3. ಜಮೀನು ಸಮತಟ್ಟು ಮಾಡಲು 10,000/- ದೊರೆಯುತ್ತದೆ.

4. ಜಮೀನಿನಲ್ಲಿ ತಡೆ ಗೋಡೆ ( ರಿವೀಟ್ ಮೆಂಟ್ ) ಕಟ್ಟಲು ಪ್ರತೀ ರೈತರಿಗೆ 1 ಲಕ್ಷ ರೂ/- ವರೆಗೆ ದೊರೆಯುತ್ತದೆ.

5.ಜಮೀನಿನಲ್ಲಿ ಕೃಷಿ ಹೊಂಡ ನಿಮಾ೯ಣ ಮಾಡಲು 43.000/- ದೊರೆಯುತ್ತದೆ.

6.ಜಮೀನಿನಲ್ಲಿ ಕೊಳವೆ ಬಾವಿಗೆ ಹಿಂಗು ಗುಂಡಿ ನಿಮಾ೯ಣ ಮಾಡಲು 19.000/- ದೊರೆಯುತ್ತದೆ.

7. ಮನೆಗಳಿಗೆ ಮಳೆ ನೀರು ಕೊಯ್ಲು ಕಾಮಗಾರಿಗೆ 30.000/- ದೊರೆಯುತ್ತದೆ.

8. ತಮ್ಮ ಜಮೀನುಗಳಲ್ಲಿ ವಿವಿಧ ಜಾತಿಯ ತೋಟಗಾರಿಕಾ ಬೆಳೆಗಳು

   ಬೆಳೆ         ಹೆಕ್ಟೇರ್ ಗೆ

a. ತೆಂಗು   - 62.496/-
b. ಗೇರು    - 72.048/-
c. ಮಾವು,ಸಪೋಟ  - 101957
d. ದಾಳಿಂಬೆ - 59879/-
e. ಸೀಬೆ  -  94704/-
f.  ಸಿಟ್ರಸ್ - 71316/-
g. ಹುಣಸೆ - 94704/-
h.ಸೀತಾಫಲ  -  53330/-
i. ನುಗ್ಗೆ     -    116996/-
j. ಬಾಳೆ   -    211656/-
k. ಪಪ್ಪಾಯ - 205498/-

9. ತೇಗ, ವನ್ನೆ, ಬೀಟೆ, ಶ್ರೀಗಂಧ,ಅಕೇಶಿ, ರಕ್ತಚಂಧನ, ಸಿಲ್ವರ್, ಟೇಕ್ ಇತರೆ ಜಾತಿಯ ಸಸಿಗಳನ್ನು ತಮ್ಮ ಜಮೀನುಗಳಲ್ಲಿ ಬೆಳೆಸಲು MGNREGA  ಯೋಜನೆಯಲ್ಲಿ ಸಹಾಯ ಧನ  ದೊರೆಯುತ್ತದೆ.

10. ಹಿಪ್ಪುನೇರಳೆ ಹೊಸ ನಾಟಿ ಮತ್ತು ಹಿಪ್ಪುನೇರಳೆ ಮರದ ಕಡ್ಡಿ ನೆಡಲು ಸಹಾಯ ಧನ ದೊರೆಯುತ್ತದೆ.

11. ಮೀನು ಸಾಕಾಣಿಕೆ ತೊಟ್ಟಿ ನಿಮಿ೯ಸಲು ಸಹಾಯ ಧನ ದೊರೆಯುತ್ತದೆ.

12. ಎರೆ ಹುಳು ಗೊಬ್ಬರ ತಯಾರಿಸುವ ತೊಟ್ಟಿ ನಿಮಾ೯ಣಕ್ಕೆ ಸಹಾಯ ಧನ  ದೊರೆಯುತ್ತದೆ.

ಇನ್ನೂ ಆನೇಕ ಅನುಕೂಲಗಳು MGNREGA ಯೋಜನೆಯಲ್ಲಿ ನೆರವಾಗುತ್ತಿವೆ.


ಹೆಚ್ಚಿನ ಮಾಹಿತಿಗಾಗಿ :-
ನಿಮ್ಮ ಗ್ರಾಮ ಪಂಚಾಯ್ತಿಗೆ ಬೇಟಿ ನೀಡಿ.
 *ಸರಕಾರದಿಂದ  ತಿಂಗಳಿಗೆ ಇಮಾಮ್ ಗೆ 4000 & ಮುಹಝಿನ್ ಗೆ 3000 ರೂಪಾಯಿ ಸಹಾಯಧನ*

ವಕ್ಫ್ ಬೋರ್ಡಿನಲ್ಲಿ ರಿಜಿಸ್ಟರ್ ಆಗಿರುವ ಮದರಸ ಮತ್ತು ಮಸೀದಿಗಳ ಇಮಾಮ್ & ಮುಹಝಿನ್ ಇಬ್ಬರಿಗೆ ತಿಂಗಳಿಗೆ 4000 & 3000 ರೂಪಾಯಿಯಂತೆ ದೊರೆಯುವುದು. ವಾರ್ಷಿಕ 3 ಲಕ್ಷಕಿಂತ ಕಡಿಮೆ ಆದಾಯ ಇರುವ ಮಸೀದಿಗಳು ಈ ಯೋಜನೆಯ ಲಾಭ ಪಡೆಯಬಹುದು.

ಇಮಾಮ್ & ಮುಹಝಿನ್ ರವರ ಬೇಕಾದ ದಾಖಲೆಗಳು
1.Passport size photo-3
2.Sanad Copy
3.Cancelled cheque
4.Aadar Card / Residence proof for 3 years

ಮಸೀದಿ ಮದರಸ ದಿಂದ  ಬೇಕಾದ ದಾಖಲೆಗಳು
1.Photo of masjid/ Madarasa
2.Registration copy
3.Statement of Account for previous year.

ಅರ್ಜಿ ದೊರೆಯುವ ಸ್ಥಳ
ಜಿಲ್ಲಾ ವಕ್ಫ್ ಅಫೀಸ್
 ನಿಮಗೆ ಪರಿಚಯವಿರುವ ವಿದ್ಯಾರ್ಥಿಗಳಿಗೆ ಈ  ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ.. ಯಾಕೆಂದರೆ  ಮುಂದಿನ ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿ ವೇತನಗಳ ಅರ್ಜಿಗಳನ್ನು ಕರೆಯಲಾಗುತ್ತದೆ.

1) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ -
www.karepass.cgg.gov.in

೨) ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ   ವಿದ್ಯಾರ್ಥಿಗಳಿಗೆ
www.sw.kar.nic.in

೩) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ -
www.gokdom.kar.nic.in

೪) ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದ ವಿದ್ಯಾರ್ಥಿ ವೇತನ (Ministry of Human Resource Development)  ಪ್ರತಿ ವರ್ಷವು ಡಿಗ್ರಿ ಪ್ರವೇಶ ಪಡೆಯುವ  ಎಲ್ಲಾ ಜಾತಿಯಾ ಬಡ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ -
www.kar.nic.in/pue

೫) ನಮ್ಮ ರಾಜ್ಯದ ಹೆಮ್ಮೆಯ ಐ.ಟಿ ಕಂಪನಿ ಇನಪೋಸ್ಸಿಸ್ ನೀಡುವ ವಿದ್ಯಾರ್ಥಿ ವೇತನ - www.vidyaposhak.org

೬)ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿ ವೇತನ -
www.kar.nic.in/pue/

೭) ದೀರುಬಾಯಿ ಅಂಬಾನಿ ವಿದ್ಯಾರ್ಥಿ ವೇತನ ಅಂಗವಿಕಲ ವಿದ್ಯಾರ್ಥಿಗಳಿಗೆ -
www.kar.nic.in/pue

೮) ಅಂಬೇಡ್ಕರ್ ನ್ಯಾಶನಲ್ ಮೆರಿಟ್ ಅರ್ವಾಡ್ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ -
www.kar.nic.in/pue

೯) ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಮೂಲ ವಿಜ್ಞಾನ ವಿಷಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (Inspire Scholarship) -
www. kar.nic.in/pue

೧೦) ಮೆರಿಟ್ ಸ್ಕಾಲರಶಿಪ್ - ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಶೇ.೮೦ ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಬಡ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ(ಇಂಜಿನಿಯರಿಂಗ್, ವೈದ್ಯಕೀಯ, ಕೃಷಿ) ಶುಲ್ಕವನ್ನು ಸರ್ಕಾರ ನೀಡುತ್ತದೆ –
www. kar.nic.in/pue

೧೧) ನಮ್ಮ ರಾಜ್ಯದ ಹೆಮ್ಮೆಯ ಇನ್ನೊಂದು ಐ.ಟಿ ಕಂಪನಿ  ವೀಪ್ರೊ ಅವರ  ಅಜೀಮ್ ಪ್ರೇಮಜೀ ಫೌಂಡೇಷನ್ -www.azimpremjifoundation.org

12. ​ವಿದ್ಯಸಿರಿ​ ​ಮತ್ತು ಶುಲ್ಕ​ ​ವಿನಾಯಿತಿ​
http://backwardclasses.kar.nic.in/BCWD/Website/backwardclassesMain.html

    http://backwardclasses.kar.nic.in/BCWD/Website/Educational_Scholarships.html

    Information ::

   http://www.scholarshipx.in/2015/10/karnataka-scholarship-onlline-last-date.html

13. ​ಸರ್ಕಾರದ​ ​ಧನಸಹಾಯಗಳ​ ​ವೆಬ್ ವಿಳಾಸ​

http://karepass.cgg.gov.in/

14. ​ಜಿಂದಾಲ್ scholarship​

 http://www.sitaramjindalfoundation.org/scholarships.php

15. ​B.L ಹೇಮವತಿ ಧನಸಹಾಯ​

 http://www.blhtrust.org/schpro.html

16. ​ಕೇಂದ್ರ ಸರ್ಕಾರದ ಧನಸಹಾಯಗಳು​

Central Govt Scholarship

     http://mhrd.gov.in/

17.  ​Indian Oil Scholarship​

     https://www.iocl.com/AboutUs/AcademicScholarships.
[09/07, 9:32 AM] Nizam Pa: *ಕಂಪ್ಯೂಟರ್ ಶಿಕ್ಷಣದೊಂದಿಗೆ ಮದರಸ ಆಧುನೀಕರಣಕ್ಕೆ  ಸರಕಾರ ದಿಂದ 10 ಲಕ್ಷ*

ಅನುದಾನ 1:- 5 lakhs
ಮದರಸಾದಲ್ಲಿ ಹೆಚ್ಚುವರಿ ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್ ಕೊಠಡಿ, ಶೌಚಾಲಯ, ಮೈದಾನದ ದುರಸ್ತಿ ಇತ್ಯಾದಿಗಳಿಗೆ 5 ಲಕ್ಷ ರುಪಾಯಿ. ಈ ಅನುದಾನ ಬಂದಾಗ ಈ  ಕೆಲಸ ಪೂರ್ತಿಗೊಳಿಸಿ ವರದಿ ಸಲ್ಲಿಸಿ ಎರಡನೇ ಅನುದಾನ ಪಡೆಯುವುದು

ಅನುದಾನ-2:
1. ಗ್ರಂಥಾಲಯ ಮತ್ತು ಪ್ರಯೋಗಾಲಯದ ಉಪಕರಣಗಳ ಖರೀದಿಗೆ 1 lakh.
2. 25ಕ್ಕಿಂತ ಹೆಚ್ಚು ಮಕ್ಕಳಿರುವ ಮಾದರಸಕ್ಕೆ 2 ಕಂಪ್ಯೂಟರ್,  1 UPS & 1 Printer, 50 ಕ್ಕಿಂತ ಹೆಚ್ಚು ಮಕ್ಕಳಿರುವ ಮಾದರಸಕ್ಕೆ 3 ಕಂಪ್ಯೂಟರ್,  1 UPS & 1 Printer
3. ಮದರಸದಲ್ಲಿ ಇಂಗ್ಲಿಷ್ ಗಣಿತ ಕನ್ನಡ ಸಮಾಜಶಾಸ್ತ್ರ ವಿಜ್ಞಾನ ಕಲಿಸುವ ಅಧ್ಯಾಪಕನಿಗೆ  60,000 ಅನುದಾನ (6000 ×10 Months)
4. ಮದರಸದಲ್ಲಿ ಹಿಫ್ಝ್ ಕಲಿಸುವ ಅಧ್ಯಾಪಕನಿಗೆ  60,000 ಅನುದಾನ (6000 ×10 Months)

ಮಸೀದಿ ಮದರಸ ದಿಂದ  ಬೇಕಾದ ದಾಖಲೆಗಳು:
1. ಅರ್ಜಿ.
2. Waqf Registration copy.
3. Audit  ಆದ ಹಿಂದಿನ 2 ವರ್ಷಗಳ ಲೆಕ್ಕಪತ್ರದ copy
4. ವಿದ್ಯಾರ್ಥಿಗಳ 2 ತಿಂಗಳ Attendance list- copy.
5. ವಿದ್ಯಾರ್ಥಿಗಳ ವಿವರ pp photos & Adress.
6. ಅಧ್ಯಾಪಕರ ವಿವರ pp photos & Adress
7. ಆಡಳಿತ ಸಮಿತಿ ಸದಸ್ಯರ ವಿವರ pp photos & Adress
8. ವ್ಯವಸ್ಥೆಗಳ ವಿವರ  photo ಸಹಿತ- class rooms, ground, toilet, bathroom, kitchen (if)
9. ಮದರಸ syllabus ಅಂಗೀಕಾರದ copy.
10. ವಕ್ಫ್ ಬೋರ್ಡ್ ಅನುಮೋದಿಸಿದ ಬೈಲಾ copy.
11. ಮದರಸ ಆಧುನೀಕರಣಕ್ಕೆ ಸರಕಾರದ ಅನುದಾನ ಪಡೆದಿಲ್ಲ ಎಂಬ ಜಿಲ್ಲಾ ವಕ್ಫ್ ನೀಡಿರುವ *ಹಿಂಬರಹ*
12. ಕಂಪ್ಯೂಟರ್ ಲ್ಯಾಬ್ ಹೊಂದಿಲ್ಲ ಎಂದು ಮದರಸದಿಂದ ಲೆಟರ್ ಹೆಡ್ ಮೂಲಕ ದೃಢೀಕರಣ.
13. ಗ್ರಂಥಾಲಯ / ಲ್ಯಾಬ್ ಹೊಂದಿಲ್ಲ ಎಂದು ಮದರಸದಿಂದ ಲೆಟರ್ ಹೆಡ್ ಮೂಲಕ ದೃಢೀಕರಣ.
14. ಮದರಸದ ಬ್ಯಾಂಕ್ ಪಾಸ್ ಬುಕ್ copy.
15. ಮದರಸದ RTC /9-11 Copy

ವಿ.ಸೂ:  ಈ  ಮೇಲಿನ 15 ದಾಖಲೆಗಳನ್ನು 1 set & 1 set xrox ಮಾಡಿ, original ಗೆ ಮದರಸ stamp ಹಾಕಿ, ಉಳಿದ ಎಲ್ಲಾ ದಾಖಲೆಗಳಿಗೂ Notary attestation ಮಾಡಿ ಅನುದಾನ-1 ಕ್ಕಾಗಿ ಸಲ್ಲಿಸುವುದು.

*ಅರ್ಜಿ ದೊರೆಯುವ ಸ್ಥಳ*:
ಅಲ್ಪಸಂಖ್ಯಾತರ  ಕಲ್ಯಾಣ ಇಲಾಖೆ
 https://gokdom.kar.nic.in/Documents/Schemes/Madarasa%20Schemes/Modernization_of_Madarasa_2017-18.pdf
*ಅರ್ಜಿ ಸಲ್ಲಿಕೆ*:
*ಅಲ್ಪಸಂಖ್ಯಾತರ  ಕಲ್ಯಾಣ ಇಲಾಖೆ  1st  floor, Moulana Azad Bhavan, Old Kent Road, PandeshoMangalore*





....................... END ......................